3 years
ಬಲವಾದ ಮೇಲ್ಮೈ ತಾಪನ ಮತ್ತು ಮಧ್ಯಮ ಆರ್ದ್ರತೆಯ ಮಟ್ಟಗಳ ಸಂಯೋಜನೆಯಿಂದಾಗಿ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇವೆ. ದಿನವಿಡೀ ತಾಪಮಾನ ಹೆಚ್ಚುತ್ತಿರುವ ಮತ್ತು ತೇವಾಂಶವು ಸುಮಾರು 50% ರಷ್ಟು ಇರುವುದರಿಂದ, ಪರಿಸ್ಥಿತಿಗಳು ಸಂವಹನ ಚಟುವಟಿಕೆಗೆ ಅನುಕೂಲಕರವಾಗಿವೆ.
ಇದರರ್ಥ ದಿನವಿಡೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಕಡಿಮೆ, ಆದರೆ ಮಧ್ಯಾಹ್ನ ಮತ್ತು ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಏಪ್ರಿಲ್ 29 ಮತ್ತು ಮೇ 1 ರ ನಡುವೆ 60-80% ರ ನಡುವೆ ಮತ್ತು 70-90% ರಷ್ಟು ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ. ಇವುಗಳು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅಲ್ಪಾವಧಿಯ, ತೀವ್ರವಾದ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.
ರಾಜ್ಯಾದ್ಯಂತ ಮಳೆ
ಕರ್ನಾಟಕದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಂಭವವಿದ್ದು, ಇಂದಿನಿಂದ ಏ.30ರವರೆಗೆ ಮಳೆಯಾಗುವ ಮುನ್ಸೂಚನೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಸಂಜೆ ವೇಳೆ ಕೆಲ ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಂಭವವಿದೆ.
ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು, ಮಿಂಚು ಹಾಗೂಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಎಚ್ಚರಿಕೆ ಸಂದೇಶದ ಪ್ರಕಾರ, ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಏಪ್ರಿಲ್ 28, 29 ಹಾಗೂ 30 ರಂದು ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಆಲಿಕಲ್ಲು ಮಳೆಯಾಗುವ ತೀವ್ರ ಸಂಭವವಿದೆ. ಈ ಹಿನ್ನೆಲೆಯಲ್ಲಿ 15 minutes ನೀಡಲಾಗಿದೆ. ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
